July 8, 2025
ಬಸವ ಜಯಮೃತ್ಯುಂಜಯ

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ತಾಯಿ ಮೇಲೆ ಆಣೆ ಮಾಡಿ ಹೇಳಿದ್ರು, ಸಂಪುಟ ನಿರ್ಣಯ ರಾಜ್ಯ ಕಾರ್ಯಕಾರಿಣಿ ಸಭೆ ಸಿಎಂ ಅವರ ಮಿಸಲಾತಿ ನಿರ್ಣಯವನ್ನು ತಿರಸ್ಕಾರ ಮಾಡಿದೆ, 24 ಗಂಟೆಯಲ್ಲಿ ಮೀಸಲಾತಿ ನೀಡ್ತಿರೋ ಇಲ್ವೋ ಎಂಬುವುದನ್ನು ಹೇಳಬೇಕು ಎಂದು ಬಸವ ಜಯಮೃತ್ಯುಂಜಯ ತಿಳಿಸಿದರು.

ಜನವರಿ 12ರೊಳಗೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕು, ಇಲ್ಲವಾದ್ರೆ ಜ.13ರಂದು ಸಿಎಂ ಕ್ಷೇತ್ರ ಶಿಗ್ಗಾಂವಿಯಲ್ಲಿ ಉಗ್ರ ಹೋರಾಟ ಮಾಡುತ್ತೇವೆ. ಸಿಎಂ ಮಾತು ತಪ್ಪಿದ್ದಾರೆ ಎಂದು ಇಡೀ ಸಮಾಜದಲ್ಲಿ ಆಕ್ರೋಶ ಕಾಡ್ತಿದೆ, ಸಿಎಂ ಬೊಮ್ಮಾಯಿ ಮಾತಿಗೆ ಗೌರವ ಕೊಟ್ಟು ಹೋರಾಟ ತಾತ್ಕಾಲಿಕ ಸ್ಥಗಿತ ಮಾಡಿದ್ವಿ, ನಮ್ಮ ಸಮುದಾಯದ ಜ‌‌ನ ಆಡಳಿತ ಪಕ್ಷದ ಯಾವುದೇ ಶಾಸಕರು ಸಮಾಧಾನಗೊಂಡಿಲ್ಲ, ಜನವರಿ 12ರೊಳಗೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕು ಎಂದು ಅವರು ಸಿಎಂ ಬೊಮ್ಮಾಯಿಯವರ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲವಾದ್ರೆ ಶಿಗ್ಗಾಂವಿಯಲ್ಲಿ 30 ಸಾವಿರ ಜನ ಸೇರಿಸಿ ಹೋರಾಟ, ಜನಶಕ್ತಿ ವ್ಯರ್ಥ ಮಾಡಲು ಬಿಡಲು ಸಾಧ್ಯವಿಲ್ಲ, ಈ ಜನ ಶಕ್ತಿಯೇ 2023ರ ವಿಧಾನಸಭೆ ಚುನಾವಣೆಯಲ್ಲಿ ಗಂಭೀರವಾದ ಪರಿಣಾಮ ಬಿಜೆಪಿ ಸರ್ಕಾರ ಅನುಭವಿಸುತ್ತದೆ.2ಎಗೆ ಸರಿ ಸಮಾನವಾದ ಶಿಕ್ಷಣ ಉದ್ಯೋದಲ್ಲಿ ಮತ್ತೊಂದು ಗ್ರೂಪ್ ಮಾಡಿ ಮೀಸಲಾತಿ ಕೊಡ್ತೀವಿ ಅಂದಿದ್ರಿ, ಎಲ್ಲವೂ ಗೊಂದಲ ಇರೋ ಕಾರಣ ಸಂಪುಟ ಸಭೆ ನಿರ್ಣಯ ವನ್ನು ತಿರಸ್ಕಾರ ಮಾಡ್ತೀವಿ ಎಂದ ಸ್ವಾಮೀಜಿ

Leave a Reply

Your email address will not be published. Required fields are marked *