September 17, 2024

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಲಿದ್ದು, 12 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಾಗಿದೆ ಎಂದು ಬಸವರಾಜ ಬೊಮ್ಮಾಯಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು. ಹಿರಿಯ ಬಿಜೆಪಿ ನಾಯಕರು ಅತೃಪ್ತ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ, ಶೀಘ್ರದಲ್ಲೇ ಬಂಡಾಯ ಶಮನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ..

ಕೆಲವು ಆಕಾಂಕ್ಷಿಗಳು ಮತ್ತು ಎಂಎಲ್ಸಿಗಳು ರಾಜೀನಾಮೆ ಕೋಡಾ ನೀಡಿದ್ದಾರೆ. ಇದು ರಾಜಕೀಯದಲ್ಲಿ ಸಹಜ ಎಂದರು. ರಾಜಕೀಯದಲ್ಲಿ ಪಕ್ಷಗಳನ್ನು ಬದಲಾಯಿಸುವುದು ಬಹಳ ಸಾಮಾನ್ಯವಾಗಿದೆ ಎಂದು ಬೊಮ್ಮಾಯಿ ಹೇಳಿದರು. ಅತೃಪ್ತ ನಾಯಕರ ಅಸಮಾಧಾನ ಶೀಘ್ರದಲ್ಲೇ ಪರಿಹರಿಸಲಾಗುವುದು. ಪಕ್ಷದ ಕಾರ್ಯಕರ್ತರು ಪ್ರಬಲರಾಗಿದ್ದಾರೆ, ಇದರಿಂದ ಬಂಡಾಯ ನಡೆದರೂ ಹೆಚ್ಚಿನ ಹಾನಿಯಾಗುವುದಿಲ್ಲ.ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕ ನೆಹರು ಓಲೇಕಾರ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ: ಸುಮಾರು 60 ರಿಂದ 65 ಕ್ಷೇತ್ರಗಳಿಗೆ ಅಭ್ಯರ್ಥಿಗಳಿಲ್ಲದ ಕಾರಣ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದಿಲ್ಲ ಮತ್ತು ಆದ್ದರಿಂದ ಅವರು ಇತರ ಪಕ್ಷಗಳ ಅಭ್ಯರ್ಥಿಗಳನ್ನು ಆಮದು ಮಾಡಿಕೊಳ್ಳುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ಹೇಳಿದರು.

Leave a Reply

Your email address will not be published. Required fields are marked *