September 17, 2024

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮುಳಬಾಗಿಲು ಕಾಂಗ್ರೆಸ್‌ ಅಭ್ಯರ್ಥಿ ವಿ.ಆದಿನಾರಾಯಣ, ಕೋಲಾರ ಕಾಂಗ್ರೆಸ್‌ ಅಭ್ಯರ್ಥಿ ಕೊತ್ತೂರು ಮಂಜುನಾಥ್‌ರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರಿಗೆ ಉಡುಗೊರೆಯಾಗಿ ನೀಡಬೇಕೆಂದು ಕರೆ ನೀಡಿದರು. ಮುಳಬಾಗಿಲಿನ ನೇತಾಜಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿ.ಆದಿನಾರಾಯಣ ಪರವಾಗಿ ಪ್ರಚಾರ ಸಭೆಯಲ್ಲಿ ಮಾತನಾಡಿ, ಮುಳಬಾಗಿಲು- ಕೋಲಾರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಅಲೆ ಬೀಸುತ್ತಿದೆ. ಬಿಜೆಪಿ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಬಿಜೆಪಿಗೆ ಅಧಿಕಾರ ನೀಡಬೇಡಿ. ಕಾಂಗ್ರೆಸ್‌ನ 5 ಗ್ಯಾರಂಟಿಗಳನ್ನು ನಾವು ಅಧಿಕಾರ ಹಿಡಿದ ಮೇಲೆ ಅನುಷ್ಠಾನಕ್ಕೆ ತರುತ್ತೇವೆಂದು ಭರವಸೆ ನೀಡಿದರು. ಜೆಡಿಎಸ್‌ನ ಕುಮಾರಸ್ವಾಮಿಗೆ ಒಂದು ಬಾರಿ ಅವಕಾಶ ನೀಡಿದ್ದೆವು. ಆದರೆ ಅವರು ಸರಿಯಾದ ರೀತಿಯಲ್ಲಿ ನಡೆದುಕೊಳ್ಳಲ್ಲ. ಜೆಡಿಎಸ್‌ಗೆ ಅವಕಾಶ ನೀಡಬೇಡಿ ಎಂದು ಮನವಿ ಮಾಡಿದ ಅವರು ದಾನ ಧರ್ಮಗಳನ್ನು ಮಾಡುವುದರಲ್ಲಿ ಎತ್ತಿದ ಕೈ ಎಂದು ಕೊತ್ತೂರು ಮತ್ತು ಆದಿನಾರಾಯಣ ಅವರ ಕೈಗಳನ್ನು ಮೇಲಕ್ಕೆತ್ತಿ ಪ್ರದರ್ಶಿಸಿದರು.

Leave a Reply

Your email address will not be published. Required fields are marked *