September 17, 2024

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ್ರೆ ಭಜರಂಗದಳವನ್ನು ಬ್ಯಾನ್‌ ಮಾಡುತ್ತೇವೆ ಎಂದು ತಿಳಿಸಿದೆ . ಇದಕ್ಕೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಆಕ್ರೋಶವನ್ನು ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ ಮಾಡುವ ಅಭಿಯಾನಕ್ಕೆ ಕರೆ ನೀಡಿವೆ

ಇಂದು ಸಂಜೆ 7 ಗಂಟೆಗೆ ಎಲ್ಲಾ ದೇವಾಲಯಗಳಲ್ಲಿ ಹನುಮಾನ್‌ ಚಾಲೀಸಾ ಪಠಿಸುವಂತೆ ಕರೆ ನೀಡಲಾಗಿದೆ. ಇದರ ನಡುವೆ ಕೆ.ಎಸ್‌. ಈಶ್ವರಪ್ಪ ಕಾಂಗ್ರೆಸ್‌ ಪ್ರಣಾಳಿಕೆಯನ್ನು ಸುಟ್ಟು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈಶ್ವರಪ್ಪ ಪ್ರಣಾಳಿಕೆ ಸುಟ್ಟಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಪ್ರಣಾಳಿಕೆ ಸರಿಯಿಲ್ಲ ಎಂದು ಈಶ್ವರಪ್ಪ ಹೇಳಿದಂತಾಗಿದೆ.

Leave a Reply

Your email address will not be published. Required fields are marked *