September 8, 2024

ಭಾನುವಾರ ಮಧ್ಯರಾತ್ರಿ ಬೆಂಗಳೂರಿನ ವಸಂತನಗರದಲ್ಲಿರುವ ಶಾಂಗ್ರಿಲಾ ಹೋಟೆಲ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ 62ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು. ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ ಶಿವಕುಮಾರ್ ಅವರಿಗೆ‌ ಶುಭಾಶಯ ತಿಳಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಶಾಸಕ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮತ್ತಿತರರು ಇದ್ದರು.
ಡಿ.ಕೆ ಶಿವಕುಮಾರ್‌ ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ. ನನ್ನ ಹುಟ್ಟುಹಬ್ಬದ ದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಉಡುಗೊರೆ ನೀಡಿದ್ದಾರೆ. ಇದೆ ವೇಳೆ ಮಾತನಾಡಿದ ರಣದೀಪ್‌ ಸಿಂಗ್‌ ಸುರ್ಜೇವಾಲ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಎಐಸಿಸಿ ವೀಕ್ಷಕರೊಂದಿಗಿನ ಸಭೆಯ ನಡುವೆಯೇ ಡಿ.ಕೆ ಶಿವಕುಮಾರ್‌ ಅವರ ಜನ್ಮದಿನ ಆಚರಣೆ ಮಾಡಲಾಯಿತು. ಎಲ್ಲರೂ ಒಟ್ಟಾಗಿ ಅವರ ಹುಟ್ಟುಹಬ್ಬ ಆಚರಿಸಿದೆವು. ಜನ್ಮದಿನದ ಶುಭಾಶಯಗಳು. ನಾವು ಕಾಂಗ್ರೆಸ್ಸಿಗರು ಎಂದರು

Leave a Reply

Your email address will not be published. Required fields are marked *