September 19, 2024

ಹುಬ್ಬಳ್ಳಿ : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇ 1ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಂಸದೀಯ ಸಚಿವ ಪ್ರಲ್ಲಾದ ಜೋಶಿ ಪರ ಮತಯಾಚನೆ ನಡೆಸಲಿದ್ದಾರೆ.

ಮೇ 1ರಂದು ಮಧ್ಯಾಹ್ನ 3.30ಕ್ಕೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಸಾರ್ವಜನಿಕ ಬಹಿರಂಗ ಸಭೆ ಉದ್ದೇಶಿಸಿ ಗೃಹ ಸಚಿವ ಅಮಿತ್ ಶಾ ಮಾತನಾಡಲಿದ್ದು, ಪ್ರಲ್ಲಾದ ಜೋಶಿ ಪರ ಪ್ರಚಾರ ನಡೆಸುವರು.

ಕಳೆದ ನಾಲೈದು ದಿನಗಳ ಹಿಂದಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಧಾವಿಸಿ ಜೋಶಿ ಪರ ಮತಯಾಚಿಸಿ, ಪಕ್ಷದ ಪ್ರಮುಖರ ಸಭೆ ಮಾಡಿ ಹೋಗಿದ್ದರು. ಅದರ ಬೆನ್ನಲ್ಲೇ ಈಗ ಚುನಾವಣಾ ಚಾಣಕ್ಯ ಎಂದೇ ಹೆಸರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಬಿಜೆಪಿ ಕಾರ್ಯಕರ್ತರಲ್ಲಿ ಮತ್ತಷ್ಟು ಹುಮ್ಮಸ್ಸು ಮೂಡಿಸಿದೆ.

Leave a Reply

Your email address will not be published. Required fields are marked *