ಹುಬ್ಬಳ್ಳಿ: ಸಂಸದ ಪ್ರಜ್ವಲ ರೇವಣ್ಣ ಪ್ರಕರಣದಿಂದ ನಾವು ಪಲಾಯನ ಮಾಡುವುದಿಲ್ಲ. ಪ್ರಕರಣದ ತನಿಖೆ ನಡೆಸುವುದರ ಜತೆಗೆ ಅಶ್ಲೀಲ ವಿಡಿಯೋಗಳನ್ನು ಪೆನ್ ಡ್ರೈವ್ ಹಂಚಿದ ಮಹಾನ್ ನಾಯಕ ಯಾರು ಎಂಬುದರ ಬಗ್ಗೆಯೂ ತನಿಖೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆಗ್ರಹಿಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪ್ರಜ್ವಲ ರೇವಣ್ಣ ಆರೋಪಿ ಸ್ಥಾನದಲ್ಲಿ ಇದ್ದಾರೆ. ಯಾವ ಕಾರಣಕ್ಕಾಗಿ ಪೆನ್ ಡ್ರೈವ್ ಸರಕ್ಯೂಲೇಟ್ ಮಾಡಿದರೂ ಎಂಬುದು ತಿಳಿಯಬೇಕಿದೆ ಎಂದರು.