September 8, 2024

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಅವರು ಹುಬ್ಬಳ್ಳಿ ಪಶ್ಚಿಮ ಕ್ಷೇತ್ರದ ನವನಗರದ ಮಾರುಕಟ್ಟೆಗೆ ಭೇಟಿ ನೀಡಿ ಪ್ರಚಾರ ನಡೆಸಿದರು.

ಜೊಗೆಲ್ಲಾಪುರ ಪ್ರಮುಖ ಬೀದಿಗಳಿಗೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನವನಗರದ ಮಾರುಕಟ್ಟೆಗೆ ಭೇಟಿ ನೀಡಿ ವ್ಯಾಪಾರಸ್ಥರು, ಗ್ರಾಹಕರು ಮತ್ತು ಸಾರ್ವಜನಿಕರಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಇಸ್ಮಾಯಿಲ್ ತಮಟಗಾರ, ಮಯೂರ ಮೋರೆ, ಹಣಮಂತ ಕೋರವಾರ, ಬಸವರಾಜ ಮಲಕಾರಿ, ಕರಿಯಪ್ಪ ಬಿಸಗಲ್, ನಾಗರಾಜ ಗೌರಿ, ಚೇತನ ಹಿರೇಕೆರೂರ, ವಿನೋದ ಜಾಧವ ಮತ್ತು ನವನಗರ ಮತ್ತು ಜೊಗೆಲ್ಲಾಪುರದ ಮುಖಂಡರು, ಕ್ಷೇತ್ರದ ಹಿರಿಯರು, ಮಹಿಳೆಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *