September 8, 2024

ಧಾರವಾಡ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಅವರು, ಹುಬ್ಬಳ್ಳಿ ಕೇಂದ್ರ ಕ್ಷೇತ್ರದ ಉಣಕಲ್ ನಗರಕ್ಕೆ ಭೇಟಿ ನೀಡಿ ಪ್ರಚಾರ ನಡೆಸಿ ಮತಯಾಚಿಸಿದರು.

ನಗರದ ಶ್ರೀ ಕರಿಸಿದ್ದೇಶ್ವರ ಮತ್ತು ಕಲ್ಮೇಶ್ವರ ದೇವಸ್ಥಾನ ಮತ್ತು ತಾಜ್ ನಗರದ ನಿಡಿಮಾರಮ್ಮದೇವಿ ದೇವಸ್ಥಾನಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಉಣಕಲ್ ಹಾಗೂ ತಾಜ್ ನಗರದ ಪ್ರಮುಖ ಬೀದಿಗಳಲ್ಲಿ ಪ್ರಚಾರ ಮಾಡಿ ಮತಯಾಚಿಸಲಾಯಿತು.
ಈ ಸಂದರ್ಭದಲ್ಲಿ ಕಲ್ಲಪ್ಪಣ್ಣ ಉಣಕಲ್, ಚೇತನ ಹಿರೇಕೆರೂರ ಮತ್ತು ಉಣಕಲ್ ಹಾಗೂ ತಾಜ್ ನಗರದ ಮುಖಂಡರು, ಕ್ಷೇತ್ರದ ಹಿರಿಯರು, ಮಹಿಳೆಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *