January 13, 2026
IMG_20240506_153425

ಧಾರವಾಡ: ಧಾರವಾಡ ತಾಲೂಕಿನ ಗರಗ ಗ್ರಾಮದಿಂದ ಬರುತ್ತಿದ್ದ ಬೈಕ್‌ ಸವಾರನೋರ್ವ ರಸ್ತೆ ಮಧ್ಯೆಯೇ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಿನ್ನೆ ತಡರಾತ್ರಿ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದ ಸಮೀಪ ಸಂಭವಿಸಿದೆ.

ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ನಾಗರಾಜ್ ಪೂಜಾರಿ (26) ಎಂಬ ಯುವಕ ಗರಗ ಗ್ರಾಮದಿಂದ ಬರುತ್ತಿದ್ದ ಸಂದರ್ಭದಲ್ಲಿ ಬೈಕ್‌ನಿಂದ ಬಿದ್ದು ಸಾವನ್ನಪ್ಪಿದ್ದಾನೆ. ಆದರೆ, ಇದು ಅನುಮಾನಾಸ್ಪದ ಸಾವು ಎಂದು ಗರಗ ಪೊಲೀಸ್‌ ಠಾಣೆಯಲ್ಲಿ ಆತನ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *