January 13, 2026
IMG-20240509-WA0012

ಬಾಗಲಕೋಟೆ :2023-2024 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಜಿಲ್ಲೆಯ ಅಂಕಿತಾ ಕೊಣ್ಣೂರ 625 ಕ್ಕೆ 625 ಅಂಕ ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾಳೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ಅಭಿನಂದನೆ ತಿಳಿಸಿದ್ದಾರೆ. ‌ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಾಡಿಗೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆಯ ಅಂಕಿತಾ ಕೊಣ್ಣೂರಗೆ ತುಂಬುಹೃದಯದ ಅಭಿನಂದನೆಗಳು.

625ಕ್ಕೆ 625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿಯಾಗಿ ಹೊರಹೊಮ್ಮಿರುವ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾಳ ಸಾಧನೆ ನಾಡಿನ ಮಕ್ಕಳಿಗೆ ಸ್ಪೂರ್ತಿಯಾಗಲಿದೆ. ಅಂಕಿತಾಳ ಶೈಕ್ಷಣಿಕ ಬದುಕು ಮುಂದೆಯೂ ಸಾಧನೆಗಳಿಂದ ಕೂಡಿರಲಿ, ಈಕೆ ಸಮಾಜಕ್ಕೆ ಬಹುದೊಡ್ಡ ಆಸ್ತಿಯಾಗಿ ಬೆಳೆಯಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *