August 18, 2025
IMG_20240522_142352

ಹುಬ್ಬಳ್ಳಿ : ತಾಲ್ಲೂಕಿನ ತಾರಿಹಾಳ ಗ್ರಾಮದಲ್ಲಿ ದನ ಮೇಯಿಸಲು ಹೋದಾಗ ಸಿಡಿಲು ಬಡಿದ ಪರಿಣಾಮ 17 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಅರುಣ ಚುರಮುರಿ ಸಿಡಿಲಿಗೆ ಬಲಿಯಾಗಿದ್ದಾನೆ. ಪ್ರತಿ ದಿನದಂತೆ ಇಂದು ಕೂಡಾ ದನ ಮೇಯಿಸಿಕೊಂಡು ಮರಳಿ ಮನೆಯತ್ತ ಬರುತ್ತಿದ್ದಾಗ ಮಳೆ ಆರಂಭವಾಗಿದೆ. ಆಗ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *