October 18, 2024

ಬೆಂಗಳೂರು: ಸಚಿವ ಬಿ.ನಾಗೇಂದ್ರ (Nagendra) ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಮೂಲಗಳಿಂದ ತಿಳಿದುಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರು ಖುದ್ದ ಹೇಳಿಕೆ ನೀಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆಂದು ಗೊತ್ತಾಗಿದೆ.

ಈ ಪ್ರಕರಣ ಮುಂದಿಟ್ಟುಕೊಂಡು ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದು ಹಾಗೂ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮುಖಭಂಗದಿಂದ ತಪ್ಪಿಸಲು ಸಚಿವ ನಾಗೇಂದ್ರ ಅವರಿಗೆ ರಾಜೀನಾಮೆ ನೀಡಲು ಸೂಚಿಸಿದ್ದು ಇಂದು ಅಥವಾ ನಾಳೆ ಬಿ.ನಾಗೇಂದ್ರ ರಾಜೀನಾಮೆ ನೀಡಲಿದ್ದಾರೆಂದು ಗೊತ್ತಾಗಿದೆ. ಈ ಪ್ರಕರಣದ ತನಿಖೆ ಬಳಿಕ ಆರೋಪ ಸುಳ್ಳಾದರೆ ಮತ್ತೆ ನಾಗೇಂದ್ರ ಅವರು ಸಚಿವ ಸಂಪುಟ ಸೇರಬಹುದು ಎಂದು ಸಿಎಂ ಹೇಳಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *