September 8, 2024

ಹುಬ್ಬಳ್ಳಿ – ಪೋಕ್ಸೋ ಪ್ರಕ್ರರಣ ಅತ್ಯಂತ ಸೂಕ್ಷ್ಮ ಹಾಗೂ ಗಂಭೀರವಾಗಿದ್ದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾನೂನು ಇದರಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ  ಮಾತನಾಡಿದ ಅವರು, ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಏನಾದರೂ ಅಹಿತಕರ ಘಟನೆಗಳು ನಡೆದರೆ ಇದು ಪೋಕ್ಸೋ ಕಾಯ್ದೆ ವ್ಯಾಪ್ತಿಗೆ ಬರುತ್ತದೆ.

ಇದರಲ್ಲಿ ಯಾವುದೇ ಸರಕಾರ ಹಾಗೂ ಪಕ್ಷ ಹಸ್ತಕ್ಷೇಪ ಮಾಡಲು ಬರಲ್ಲ ಆದ್ದರಿಂದ ಇದರಲ್ಲಿ ತನ್ನದೇ ಆದ ತನಿಖೆಯನ್ನ ಪೊಲೀಸರು ‌ಮಾಡುತ್ತಾರೆ. ಚಿತ್ರದುರ್ಗ ಮುರುಘಾಶರಣರ ಮೇಲೆ ಪೋಕ್ಸೋ ಕಾಯ್ದೆ ಮೇಲೆ ಬಂಧನ ಮಾಡಿದ್ದು ಏನಾಯಿತು ಗೊತ್ತು. ಹೀಗಾಗಿ ಪೋಕ್ಸೋ ತನ್ನದೇ ಆದ ಹೈಕೋರ್ಟ್ ಬಂಧನ ವಾರಂಟ್ ಜಾರಿ ಮಾಡಿದೆ‌. ಕೋರ್ಟ್ ನಿರ್ದೇಶನ ಮೇರೆಗೆ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯಯಿಲ್ಲ’ ಎಂದರು.

ಪೋಕ್ಸೋ ಕಾಯ್ದೆಯಡಿ ತನ್ನದೇ ಆದ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ . ಹೈಕೋರ್ಟ್ ವಾರೆಂಟ್ ಜಾರಿ ಮಾಡಿದೆ .ಕೋರ್ಟ್ ನ ನಿರ್ದೇಶನ ಇರಬೇಕಾದರೆ ಕಾಂಗ್ರೆಸ್ ಬಿಜೆಪಿಯ ಪ್ರಶ್ನೆ ಬರಲ್ಲ ಯಡಿಯೂರಪ್ಪ ತಪ್ಪುತಸ್ಥರು ಹೌದೋ ಅಲ್ಲವೋ ಅನ್ನೋದನ್ನು ನ್ಯಾಯಾಲಯ ನಿರ್ಧರಿಸುತ್ತೆ. ಆದ್ರೆ ಸಂತ್ರಸ್ತೆಯೇ ನ್ಯಾಯಾಧೀಶರ ಎದುರು ಹೇಳಿಕೆ ಕೊಟ್ಟಿದ್ದಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *