May 9, 2025
IMG_20240601_133924

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಮೇಲೆ ನಾನ್ ಬೇಲೆಬಲ್ ವಾರೆಂಟ್ ಆಗುತ್ತಿದ್ದಂತೆ ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ನಡೆದಿದೆ. ಯಡಿಯೂರಪ್ಪ ರಾಜ್ಯ ಕಂಡ ಅತ್ಯಂತ ಜನಪ್ರಿಯ ನಾಯಕನಾಗಿದ್ದು, 82 ವರ್ಷದ ವ್ಯಕ್ತಿ ಮೇಲೆ ಈ ರೀತಿ ಆರಂಭಿಸುವುದು ಸರಿಯಲ್ಲ  ಎಂದು ಹೇಳಿದರು.

ವಾಲ್ಮೀಕಿ ನಿಗಮದ ಹಗರಣ ಸಿದ್ದರಾಮಯ್ಯ ಬುಡಕ್ಕೆ ಬಂದಿದೆ. ಈ ಕಾರಣಕ್ಕಾಗಿ ವಿಷಯಾಂತರ ಮಾಡಲು ಈ ರೀತಿ ಮಾಡಲಾಗುತ್ತಿದೆ. ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಈ ರೀತಿ ಮಾಡಲಾಗಿದೆ. ಖುದ್ದು ಸರ್ಕಾರವೇ ಕೋರ್ಟ್ ಗೆ ಹೋಗಿ ಬಂಧನದ ಆದೇಶ ತೆಗೆದುಕೊಂಡುಬಂದಿದೆ. ಆದ್ದರಿಂದ ಇದನ್ನು ನಾವು ತೀವ್ರವಾಗಿ ಖಂಡಿಸ್ತೇವೆ, ಮುಂದಿನ ದಿನಗಳಲ್ಲಿ ನಾವು ಸೂಕ್ತ ಹೋರಾಟ ಮಾಡ್ತೇವೆ ಎಂದು  ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

Leave a Reply

Your email address will not be published. Required fields are marked *