ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ವಿಕಾಸಸೌಧದಲ್ಲಿ ಇಂದು ಗಿಗ್ ವರ್ಕರ್ಸ್ ಮಸೂದೆ ಬಗ್ಗೆ ಅಗ್ರಿಗೇಟರ್ಸ್ಗಳೊಂದಿಗೆ ಸಭೆ ನಡೆಸಿದರು. ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ರೂ. 2 ಲಕ್ಷ ಜೀವ ವಿಮೆ ಹಾಗೂ ರೂ. 2 ಲಕ್ಷ ವಿಮಾ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ.
ದೇಶದಲ್ಲೇ ಮೊದಲ ಬಾರಿಗೆ ಜಾರಿ ಮಾಡಲಾದ ಯೋಜನೆ ಇದಾಗಿದ್ದು, ಇದರಿಂದ ಲಕ್ಷಾಂತರ ಕಾರ್ಮಿಕರಿಗೆ ಸಹಾಯವಾಗಲಿದೆ. ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತರಾದ ಶ್ರೀ ಎನ್ ಎಚ್ ಗೋಪಾಲಕೃಷ್ಣ ಭಾ.ಆ.ಸೇ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.