September 16, 2024

ಹುಬ್ಬಳ್ಳಿ:  ಸ್ಕ್ರೂ ಡ್ರೈವರ್ ನಿಂದ ಯುವಕನಿಗೆ  ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಸುಳ್ಳು ಗ್ರಾಮದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಗ್ರಾಮದ ದ್ಯಾಮಣ್ಣ ಎನ್ನುವ ಯುವಕನಿಗೆ ಹಲ್ಲೆ ಮಾಡಲಾಗಿದೆ. ಪರಿಚಯಸ್ತ ಯುವಕನೇ ದ್ಯಾಮಣ್ಣನ ಬೆನ್ನ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಗೊತ್ತಾಗಿದ್ದು, ಸದ್ಯ ದ್ಯಾಮಣ್ಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದಾನೆ. ಈ ಘಟನೆ ಕುರಿತು ಇದೀಗ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತ ವ್ಯಕ್ತಿಯನ್ನು ಪೊಲೀಸರು ಹುಡುಕುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

Leave a Reply

Your email address will not be published. Required fields are marked *