September 17, 2024

ಬೆಂಗಳೂರು: ಕುಡಿದ ಅಮಲಿನಲ್ಲಿ ಕಟ್ಟಡದಿಂದ ತಳ್ಳಿ ಯುವಕನ ಕೊಲೆ‌  ಮಾಡಲಾಗಿರುವ ಘಟನೆ ಬೆಂಗಳೂರಿನಲ್ಲಿ  ನಡೆದಿದೆ. ವಿಶಾಲ್ ಯಾದವ್ ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಅಭಿಷೇಕ್ ಕೊಲೆ ಮಾಡಿದ ಆರೋಪಿ. ನಿನ್ನೆ ರಾತ್ರಿ ನಿರ್ಮಾಣ ಹಂತದ ಕಟ್ಟಡದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು ಗಲಾಟೆ ವೇಳೆ ಅಭಿಷೇಕ್ ತನ್ನ ಸ್ನೇಹಿತ ವಿಶಾಲ್​ನನ್ನು ತಳ್ಳಿದ್ದು ಕಟ್ಟಡದಿಂದ ಕೆಳಗೆ ಬಿದ್ದ ವಿಶಾಲ್ ಯಾದವ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು ಘಟನೆ ಬಳಿಕ ಆರೋಪಿ ಸ್ನೇಹಿತ ಅಭಿಷೇಕ್ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

Leave a Reply

Your email address will not be published. Required fields are marked *