September 17, 2024

ಹುಬ್ಬಳ್ಳಿಯಲ್ಲಿ ಕಳೆದ ಮೂರು ತಿಂಗಳಲ್ಲಿ 3 ಕೊಲೆಗಳಾದವು. ಇಬ್ಬರು ಯುವತಿಯರು ಮತ್ತು ಓರ್ವ ಯುವಕನ ಕೊಲೆಯಾಯಿತು. ಇದರಿಂದ ಭಯಗೊಂಡ ಹುಬ್ಬಳ್ಳಿ ಜನತೆ ಮಹಾನಗರದ ಕಾನೂನು ಸುವ್ಯವಸ್ಥೆ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತ ರೇಣುಕಾ ಸುಕುಮಾ‌ರ್ ಅವರನ್ನು ವರ್ಗಾವಣೆಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರು. ಇದೀಗ ಸರ್ಕಾರ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತ ರೇಣುಕಾ ಸುಕುಮಾ‌ರ್ ಸೇರಿದಂತೆ ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ

ಮಾಡಿ ಆದೇಶ ಹೊರಡಿಸಿದೆ.ಐಪಿಎಸ್ ಅಧಿಕಾರಿ ರೇಣುಕಾ ಸುಕುಮಾ‌ರ್ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಎಐಜಿಪಿಯಾಗಿ ಬೆಂಗಳೂರು ಡಿಜಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತರಾಗಿ ಐಪಿಎಸ್‌ ಅಧಿಕಾರಿ ಎನ್. ಶಶಿಕುಮಾ‌ರ್ ಅವರನ್ನು ನೇಮಿಸಲಾಗಿದೆ. ಹೌದು, ಸರ್ಕಾರ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತೆ ರೇಣುಕಾ ಸುಕುಮಾರ್​ ಸೇರಿದಂತೆ ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಹೀಗಿದೆ..

ಲಾಬೂರಾಮ್​​​​: ಐಜಿಪಿ ಕೇಂದ್ರ ವಲಯ
ರವಿಕಾಂತೇಗೌಡ: ಐಜಿಪಿ ಕೇಂದ್ರ ಕಚೇರಿ-1
ಡಾ.ಕೆ.ತ್ಯಾಗರಾಜನ್: ಐಜಿಪಿ, ಐಎಸ್​​ಡಿ
ಎನ್.ಶಶಿಕುಮಾರ್: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್
ಬಿ.ರಮೇಶ್: ಡಿಐಜಿಪಿ ಪೂರ್ವ ವಲಯ ದಾವಣಗೆರೆ
ಸೀಮಾ ಲಾಟ್ಕರ್​​: ಪೊಲೀಸ್ ಆಯುಕ್ತ, ಮೈಸೂರು ನಗರ
ರೇಣುಕಾ ಸುಕುಮಾರ್: ಎಐಜಿಪಿ (ಬೆಂಗಳೂರು ಡಿಜಿ ಕಚೇರಿ)
ಸಿ.ಕೆ.ಬಾಬಾ: ಎಸ್​​​​​ಪಿ, ಬೆಂಗಳೂರು ಗ್ರಾಮಾಂತರ
ಎನ್.ವಿಷ್ಣುವರ್ಧನ್: ಎಸ್​​​​​ಪಿ, ಮೈಸೂರು ಜಿಲ್ಲೆ
ಸುಮನ್​.ಡಿ.ಪೆನ್ನೇಕರ್: ಎಸ್​​​​​ಪಿ, ಬಿಎಂಟಿಎಫ್
ಸಿ.ಬಿ.ರಿಷ್ಯಂತ್: ಎಸ್​​​​​ಪಿ, ವೈರ್​ಲೆಸ್​​​​
ಚನ್ನಬಸವಣ್ಣ: ಎಐಜಿಪಿ, ಆಡಳಿತ ಪ್ರಧಾನ ಕಚೇರಿ
ಎಂ.ನಾರಾಯಣ್: ಎಸ್​​​​​ಪಿ, ಉತ್ತರ ಕನ್ನಡ
ಎಸ್​​.ಫಾತಿಮಾ: ಡಿಸಿಪಿ, ಬೆಂಗಳೂರು ಆಗ್ನೇಯ ವಿಭಾಗ
ಅರುಣಾಂಗ್ಷು ಗಿರಿ: ಎಸ್​​​​​ಪಿ, ಸಿಐಡಿ
ಡಿ.ಎಲ್​.ನಾಗೇಶ್: ಡಿಸಿಪಿ, ಸಿಎಆರ್​ಹೆಚ್​ ಪ್ರಧಾನ ಕಚೇರಿ, ಬೆಂಗಳೂರು
ಪದ್ಮಿನಿ ಸಾಹೋ: ಡಿಸಿಪಿ ಆಡಳಿತ, ಬೆಂಗಳೂರು ನಗರ
ಪ್ರದೀಪ್ ಗುಂಟಿ: ಎಸ್​​​​​ಪಿ, ಬೀದರ್ ಜಿಲ್ಲೆ
ಯತೀಶ್.ಎನ್: ಎಸ್​​​​​ಪಿ, ದಕ್ಷಿಣ ಕನ್ನಡ ಜಿಲ್ಲೆ
ಮಲ್ಲಿಕಾರ್ಜುನ ಬಾಲದಂಡಿ: ಎಸ್​​​​​ಪಿ, ಮಂಡ್ಯ ಜಿಲ್ಲೆ
ವಿ.ಜೆ.ಡಾ.ಶೋಭಾ ರಾಣಿ: ಎಸ್​​​​​ಪಿ, ಬಳ್ಳಾರಿ ಜಿಲ್ಲೆ
ಡಾ.ಟಿ.ಕವಿತಾ: ಎಸ್​​​​​ಪಿ, ಚಾಮರಾಜನಗರ ಜಿಲ್ಲೆ
ಬಿ.ನಿಖಿಲ್: ಎಸ್​​​​​ಪಿ, ಕೋಲಾರ ಜಿಲ್ಲೆ
ಕುಶಾಲ್ ಚೌಕ್ಸಿ: ಎಸ್​​​​​ಪಿ, ಚಿಕ್ಕಬಳ್ಳಾಪುರ ಜಿಲ್ಲೆ
ಮಹಾನಿಂಗ್ ನಂದಗಾವಿ: ಡಿಸಿಪಿ ಕಾನೂನು ಸುವ್ಯವಸ್ಥೆ ಹುಬಳ್ಳಿ-ಧಾರವಾಡ

Leave a Reply

Your email address will not be published. Required fields are marked *