January 13, 2026
karnatakahighcourt-1549164792

ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಇಲ್ಲದೆ ಖಾಸಗಿ ವ್ಯಕ್ತಿಯೊಬ್ಬನ ವಿರುದ್ಧ ಕಾನೂನುಬಾಹಿರ ಕ್ರಮ ಕೈಗೊಂಡ ಆರೋಪದ ಮೇಲೆ ಏಳು ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಪ್ರಕರಣಗಳ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ಹಿಂದಿನ ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಏಳು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ

ಅರ್ಜಿದಾರ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಸುವುದಕ್ಕಾಗಿ ಸಕ್ಷಮ ಪ್ರಾಧಿಕಾರ ಅನುಮತಿ ನೀಡಿದಲ್ಲಿ ವಿಚಾರಣಾ ಪ್ರಕ್ರಿಯೆ ಮುಂದುವರಿಸಬಹುದು ಎಂದು ಹೇಳಿರುವ ಹೈಕೋರ್ಟ್ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿರುವ ಕ್ರಮ ರದ್ದುಪಡಿಸಿದೆ

Leave a Reply

Your email address will not be published. Required fields are marked *