September 8, 2024

ಗಂಧದ ಮರ ಕಳ್ಳತನ ಮಾಡಿದ್ದ ಆರೋಪದಡಿ ವ್ಯಕ್ತಿಯೊಬ್ಬರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 5 ವರ್ಷಗಳ ಜೈಲು ಶಿಕ್ಷೆಯನ್ನು ಎತ್ತಿಹಿಡಿದಿರುವ ಹೈಕೋರ್ಟ್, ₹1 ಲಕ್ಷ ದಂಡ ವಿಧಿಸಿದೆ.

ಮಂಡ್ಯ ಜಿಲ್ಲೆ ಬಳ್ಳೇನಹಳ್ಳಿಯ ಆರೋಪಿ ದೇವರಾಜಾಚಾರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕ‌ರ್ ಅಮರಣ್ಣನವರ ಅವರಿದ್ದ ಏಕಸದಸ್ಯ ನ್ಯಾಯಪೀಠ ಸರ್ಕಾರದ ಮೇಲ್ಮನವಿ ಎತ್ತಿಹಿಡಿದಿದೆ. ಅಂತೆಯೇ, ಆರೋಪಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿ ಆದೇಶಿಸಿದೆ.

Leave a Reply

Your email address will not be published. Required fields are marked *