September 8, 2024

ಬೆಂಗಳೂರು: ಕೌಟುಂಬಿಕವಾಗಿ ಗಂಡ ಹೆಂಡತಿ ನಡುವೆ ನಡೆಯುವ ಜಗಳವು ಅಪರಾಧ ಕೃತ್ಯವಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ದಂಪತಿ ನಡುವಿನ ಜಗಳವು ಭಾರತೀಯ ದಂಡ ಸಂಹಿತೆ ಸೆಕ್ಷನ್ 498 ಅಡಿ ಕ್ರೌರ್ಯದಂತಹ ಅಪರಾಧ ಕೃತ್ಯವಾಗುವುದಿಲ್ಲ ಕ್ರೌರ್ಯ ಎಂದರೆ ಉದ್ದೇಶ ಪೂರ್ವಕ ಕೃತ್ಯವಾಗಿದ್ದು, ಆತ್ಮಹತ್ಯೆಗೆ ಅಥವಾ ಜೀವಕ್ಕೆ ಅಪಾಯ ತಂದು ಕೊಳಲು ವಿವಾಹಿತ ಮಹಿಳೆಯನ್ನು ಪ್ರಚೋದಿಸರಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ.

ಪತ್ನಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ದೋಷಿಯಾಗಿ ಪರಿಗಣಿಸಿ ಶಿಕ್ಷೆ ವಿಧಿಸಿರುವ ವಿಚಾರಣಾ ನ್ಯಾಯಾಲಯದ ಆದೇಶ ರದ್ದು ಕೋರಿ ಮಡಿಕೇರಿ ತಾಲೂಕಿನ ಮತ್ತು ಮುರ್ನಾಡ್ ಗ್ರಾಮದ ನಿವಾಸಿಗಳಾದ ಬಿ.ಎಸ್.ಜನಾರ್ದನ (52), ಮತ್ತು ಆತನ ತಾಯಿ ಉಮಾವತಿ (73) ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್ ಅವರ ಪೀಠ ಈ ಮೇಲಿನಂತೆ ಆದೇಶ ಮಾಡಿದೆ.

Leave a Reply

Your email address will not be published. Required fields are marked *