October 18, 2024

ಹುಬ್ಬಳ್ಳಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ( ಹೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ವೈಶಾಲಿ ಎಂ.ಎಲ್ (ಐಎಎಸ್) ಗುರುವಾರ ಅಧಿಕಾರ ವಹಿಸಿಕೊಂಡರು.

ಈ ಹಿಂದಿನ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ರೋಷನ್ ( ಐಎಎಸ್) ಅವರು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಹೊಂದಿದ್ದರು.ಈ ಹಿನ್ನೆಲೆ ತೆರವಾಗಿದ್ದ ಎಂ.ಡಿ ಹುದ್ದೆಗೆ ವೈಶಾಲಿ ಎಂ.ಎಲ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಇವರು ಗದಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

 

Leave a Reply

Your email address will not be published. Required fields are marked *