September 8, 2024

ಬೆಂಗಳೂರು: ಪೊಲೀಸ್‌ ಠಾಣೆಯಲ್ಲಿಯೇ ಪರಸ್ಪರ ಬೈದಾಡಿಕೊಂಡು ದುರ್ನಡತೆ ತೋರಿದ್ದ ಆರೋಪದ ಮೇಲೆ ಪುಟ್ಟೇನಹಳ್ಳಿ ಎಎಸ್‌ಐ ಬಿ. ಮಂಜುನಾಥ್, ಹೆಡ್ ಕಾನ್ಸ್‌ಟೆಬಲ್ ಅಂಜನಾಮೂರ್ತಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಎರಡು ದಿನಗಳ ಹಿಂದೆ ಠಾಣೆಯಲ್ಲಿ ಕುರ್ಚಿ ವಿಚಾರವಾಗಿ ಎಎಸ್‌ಐ ಮತ್ತು ಎಚ್‌ಸಿ ಜಗಳವಾಡಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಇನ್‌ಸ್ಪೆಕ್ಟರ್‌ ರವಿಕುಮಾರ್ ಅವರು, ಆಶಿಸ್ತು ತೋರಿದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್‌ ಜಗಲಾಸರ್‌ ಅವರಿಗೆ ವರದಿ ಸಲ್ಲಿಸಿದ್ದರು. ಈ ವರದಿ ಹಿನ್ನೆಲೆಯಲ್ಲಿ ಎಎಸ್‌ ಹಾಗೂ ಎಚ್‌ಸಿ ವಿರುದ್ಧ ಡಿಸಿಪಿ ಶಿಸ್ತು ಕ್ರಮ ಜರುಗಿಸಿದ್ದಾರೆ ಎನ್ನಲಾಗಿದೆ.

ಕರ್ತವ್ಯದಲ್ಲಿ ದುರ್ನಡತೆ ಆರೋಪದಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಎಎಸ್‌ಐ ಹಾಗೂ ಹೆಡ್‌ಕಾನ್ಸ್‌ಟೆಬಲ್‌ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್‌ ತಿಳಿಸಿದ್ದಾರೆ.

Leave a Reply

Your email address will not be published. Required fields are marked *