September 8, 2024

ಅತಿವೃಷ್ಟಿಯಿಂದ ಸಂಪೂರ್ಣ ಹಾನಿಗೊಳಗಾದ ಮನೆಗಳನ್ನು ಸರ್ಕಾರದಿಂದಲೇ ಮಂಜೂರು ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.

ವಾಲ್ಮೀಕಿ ಹಗರಣದ ವಿಚಾರದಲ್ಲಿ ಪ್ರತಿಪಕ್ಷದ ಧರಣಿ ನಡುವೆಯೇ ಕೈಗೆತ್ತಿಕೊಂಡ ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಚಿವರು, ಪರಿಹಾರ ಕಾಮಗಾರಿಗಳಿಗೆಂದು ಜಿಲ್ಲೆಗಳಿಗೆ 777.54 ಕೋಟಿ ರೂ. ಕೊಟ್ಟಿದ್ದೇವೆ. ಬೇಕಿದ್ದರೆ ಇನ್ನೂ ಹಣ ಕೊಡಲು ಸಿದ್ಧರಿದ್ದೇವೆ ಎಂದರು.

ಈವರೆಗೆ 2450 ಮನೆಗಳು ಹಾನಿಯಾಗಿದೆ, ಕೆಲವು ಭಾಗಶಃ ಹಾನಿಗೊಳಗಾಗಿದ್ದು, ಕೆಲವು ಪೂರ್ಣ ನಾಶವಾಗಿವೆ. ಅಂತಹ ಮನೆಗಳಿಗೆ ಪರಿಹಾರದ ಜತೆಗೆ ಸರ್ಕಾರದಿಂದಲೇ ಮನೆ ಮಂಜೂರಾತಿ ನೀಡಲಾಗುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *