January 23, 2026
Screenshot 2024-07-21 145323

ಗುರಾಯಿಸಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಯ್ಸಳ ನಗರದ ಮನೋಜ್ (22) ಕೊಲೆಯಾದ ಯುವಕ. ಹೊಯ್ಸಳ ನಗರ 3ನೇ ಮುಖ್ಯರಸ್ತೆಯಲ್ಲಿ ಸ್ನೇಹಿತರೊಂದಿಗೆ ಯುವಕ ನಡೆದುಕೊಂಡು ಹೋಗುತ್ತಿದ್ದನು.

ಈ ವೇಳೆ ಎದುರಿನಿಂದ ಬಂದ‌ ವ್ಯಕ್ತಿ, ಯುವಕನನ್ನು ಗುರಾಯಿಸಿಕೊಂಡು ಹೋಗುತ್ತಿದ್ದನು. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆಯೇ ಆಗಿದೆ. ಈ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *