January 13, 2026
high-court-1

ಬೆಕ್ಕು ಕಳವು ಪ್ರಕರಣ’ವೊಂದು ಸೋಮವಾರ ಹೈಕೋರ್ಟ್‌ನಲ್ಲಿ ಸದ್ದು ಮಾಡಿದ್ದು, ನ್ಯಾಯಮೂರ್ತಿಗಳ ಹಾಗೂ ಕೋರ್ಟ್‌ ಹಾಲ್‌ನಲ್ಲಿ ನೆರೆದಿದ್ದ ವಕೀಲರಿಗೆ ಅಚ್ಚರಿ ಮೂಡಿಸುವುದರ ಜೊತೆಗೆ ಕೆಲ ಸಮಯ ನಗುವಿಗೆ ಕಾರಣವಾಯಿತು. ಬೆಕ್ಕುಕಳವು ಮಾಡಿ ಮನೆಯಲ್ಲಿ ಬಂಧಿಸಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಅಪರೂಪದ ಕ್ರಿಮಿನಲ್ ಪ್ರಕರಣವೊಂದರ ವಿಚಾರಣೆಗೆ ಹೈಕೋರ್ಟ್‌ ತಡೆ ನೀಡಿದೆ.

ಈ ಸಂಬಂಧ ಆನೇಕಲ್ ತಾಲ್ಲೂಕಿನ ಶಿಕಾರಿಪಾಳ್ಯದ ಸಿರಾಜ್ ಲೇಔಟ್ ನಿವಾಸಿ ತಾಹಾ ಹುಸೈನ್ ಬಿನ್ ಖಾಲಿದ್ ಮೆಹಬೂಬ್ (31) ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

Leave a Reply

Your email address will not be published. Required fields are marked *