October 18, 2024

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಅಂತಾ ನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಈ ವಿಚಾರ ರಾಜಕೀಯ ವಲಯದಲ್ಲಿ ಭಾರಿ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಅಂತಾ ನಾಮಕರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದರು. ಸ್ವಲ್ಪ ದಿನ ಖುಷಿಯಾಗಿರಲಿ 2028ಕ್ಕೆ ಮತ್ತೆ ಮರುನಾಮಕರಣ ಮಾಡ್ತೀವಿ ಎಂದಿದ್ದರು. ಸದ್ಯ ಈಗ ಹೆಚ್​ಡಿಕೆ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬರೆದಿಟ್ಟುಕೊಳ್ಳಲಿ, ದಾಖಲೆ ಬೇಕಾಗುತ್ತೆ. 2028ಕ್ಕೆ ಇದೇ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಸವಾಲು ಹಾಕಿದ್ದಾರೆ.

Leave a Reply

Your email address will not be published. Required fields are marked *